ADVERTISEMENT

ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2011, 18:55 IST
Last Updated 18 ಏಪ್ರಿಲ್ 2011, 18:55 IST

ರಾಜರಾಜೇಶ್ವರಿ ನಗರ:  ಜನರ ನಿರೀಕ್ಷೆಗೆ ತಕ್ಕಂತೆ ಬೆಂಗಳೂರು ನಗರವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕಾಗಿ ಹಲವು ಶಾಶ್ವತ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಸದಸ್ಯೆ ರಾಜೇಶ್ವರಿ ಬೆಳಗೋಡ್ ಹೇಳಿದರು. ನಾಯಂಡನಹಳ್ಳಿ ವಾರ್ಡ್‌ನ ವಿನಾಯಕ ನಗರದಲ್ಲಿ ಹಮ್ಮಿಕೊಂಡಿದ್ದ ಕೆಂಪೇಗೌಡರ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೆಂಪೇಗೌಡ ನಿರ್ಮಿತ ಬೆಂಗಳೂರು ನಗರವನ್ನು ಇನ್ನಷ್ಟು ಸುಂದರಗೊಳಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.ಒಕ್ಕಲಿಗರ ಸಂಘದ ಉಪಾಧ್ಯಕ್ಷ ಪ್ರೊ.ಕೆ.ಮಲ್ಲಯ್ಯ ಮಾತನಾಡಿ, ಕೆಂಪೇಗೌಡರ ನಿರೀಕ್ಷೆಗೂ ಮೀರಿ  ನಗರ ಬೆಳೆಯುತ್ತಿದೆ ಎಂದರು.

ಬಿಜೆಪಿ ಮುಖಂಡರಾದ ಅರುಣ್ ಸೋಮಣ್ಣ, ಉಮೇಶ್ ಬೆಳಗೊಡು, ಬಿಬಿಎಂಪಿ ಸದಸ್ಯ ಉಮೇಶ್ ಶೆಟ್ಟಿ, ಕಾರ್ಯಪಾಲಕ ಎಂಜಿನಿಯರ್ ಗುರುನಾಥ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಸವರಾಜು, ಕಂದಾಯ ಅಧಿಕಾರಿ ರಾಮೇಗೌಡ, ನಾಯಂಡನಹಳ್ಳಿ ವಾರ್ಡ್ ಅಧ್ಯಕ್ಷ ರಾಜಣ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.