ADVERTISEMENT

ಜಾನಪದ ಹಬ್ಬ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2012, 19:30 IST
Last Updated 26 ಏಪ್ರಿಲ್ 2012, 19:30 IST

ನೆಲಮಂಗಲ: ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಶಾಖೆ ವತಿಯಿಂದ ಇದೇ 27ರಂದು ಪಟ್ಟಣದಲ್ಲಿ `ನೆಲಮಂಗಲ ಕರವೇ ಹಬ್ಬ, ಜಾನಪದ ಉತ್ಸವ ಮತ್ತು ಬೃಹತ್ ಸಮಾವೇಶ~ ಹಮ್ಮಿಕೊಳ್ಳಲಾಗಿದೆ.

ಈ ಪ್ರಯುಕ್ತ ಮಧ್ಯಾಹ್ನ 3ಕ್ಕೆ ಗೋಪಿ ವೆಂಕಟೇಶ್ವರ ಕಲ್ಯಾಣ ಮಂಟಪದಿಂದ ಪೇಟೆ ಬೀದಿವರೆಗೂ ಜನಪದ ಕಲೆಗಳ ಪ್ರದರ್ಶನಗಳೊಂದಿಗೆ ಮೆರವಣಿಗೆ, ಸಂಜೆ 6ಕ್ಕೆ ಐಟಿಐ ಕಾಲೇಜು ಆವರಣದಲ್ಲಿ ಸಮಾವೇಶ ನಡೆಸಲಾಗುವುದು. ಸಮಾವೇಶದಲ್ಲಿ ಸಾಹಿತಿ ಸುಧಾ ಬರಗೂರು ತಂಡದವರಿಂದ `ನಗೆ ಹಬ್ಬ~ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಿಗೆ ಗೌರವ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಗಣ್ಯರಿಗೆ ಸನ್ಮಾನ ಇತ್ಯಾದಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಜಿ.ಉಮೇಶ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.