ADVERTISEMENT

ಜಾರಿ ಬಿದ್ದು ಮೆಟ್ರೋ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2013, 19:32 IST
Last Updated 22 ಸೆಪ್ಟೆಂಬರ್ 2013, 19:32 IST

ಬೆಂಗಳೂರು: ‘ನಮ್ಮ ಮೆಟ್ರೊ’ ಕಾಮಗಾರಿ ವೇಳೆ ಕಾರ್ಮಿಕನೊಬ್ಬ ಮೆಟ್ಟಿಲಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಪೀಣ್ಯ ನಿಲ್ದಾಣದಲ್ಲಿ ಭಾನುವಾರ ನಡೆದಿದೆ.

ಕಮಲೇಶ್‌ ರಾಮ್‌ (32) ಮೃತ ಕಾರ್ಮಿಕ. ಸರಳು ಹಿಡಿದುಕೊಂಡು ನಿಲ್ದಾಣದ ಮೇಲ್ಭಾಗಕ್ಕೆ ಹತ್ತುತ್ತಿದ್ದಾಗ, ಜಾರಿ ಮೆಟ್ಟಿಲಿನಿಂದ ಕೆಳಗೆ ಬಿದ್ದಿದ್ದಾನೆ. ತಲೆಗೆ ಪೆಟಗಿ ಸಾವನ್ನಪ್ಪಿದ್ದಾನೆ. ಕಾಮಗಾರಿ ಗುತ್ತಿಗೆದಾರರು ಹಾಗೂ ಮೇಲ್ವಿಚಾರಕರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಿಲಾಗಿದೆ  ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.