ADVERTISEMENT

ಜೆಆರ್‌ಎಫ್‌ ಪರೀಕ್ಷೆಯಲ್ಲಿ ಕೃಷಿ ವಿಶ್ವವಿದ್ಯಾಲಯ ಪ್ರಥಮ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2018, 20:10 IST
Last Updated 12 ಮಾರ್ಚ್ 2018, 20:10 IST
ರಾಧಾಮೋಹನ್‌ ಸಿಂಗ್‌ ಅವರು ಡಾ.ಎಂ.ಎಸ್‌.ನಟರಾಜು ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು
ರಾಧಾಮೋಹನ್‌ ಸಿಂಗ್‌ ಅವರು ಡಾ.ಎಂ.ಎಸ್‌.ನಟರಾಜು ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು   

ಬೆಂಗಳೂರು: ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಪರಿಷತ್ 2016-17ನೇ ಸಾಲಿನಲ್ಲಿ ನಡೆಸಿದ ಕಿರಿಯ ಸಂಶೋಧನಾ ಫೆಲೋಷಿಪ್‌ (ಜೆಆರ್‍ಎಫ್) ಪರೀಕ್ಷೆಯಲ್ಲಿ ಕೃಷಿ ವಿಶ್ವವಿದ್ಯಾಲಯವು ಪ್ರಥಮ ಸ್ಥಾನ ಗಳಿಸಿದೆ.

ವಿಶ್ವವಿದ್ಯಾಲಯದ 50 ವಿದ್ಯಾರ್ಥಿಗಳು ‘ಕೃಷಿ ವಿಜ್ಞಾನಗಳು’ ವಿಷಯ ಹಾಗೂ 10 ವಿದ್ಯಾರ್ಥಿಗಳು ‘ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ’ ವಿಷಯದಲ್ಲಿ ತೇರ್ಗಡೆ ಹೊಂದಿದ್ದಾರೆ.

ದೇಶದ 60 ಕೃಷಿ ವಿಶ್ವವಿದ್ಯಾಲಯಗಳು, ಮೂರು ಕೇಂದ್ರೀಯ ಮತ್ತು ನಾಲ್ಕು ಡೀಮ್ಡ್‌ ಕೃಷಿ ವಿಶ್ವವಿದ್ಯಾಲಯಗಳ ಒಟ್ಟು 475 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ADVERTISEMENT

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕೇಂದ್ರ ಕೃಷಿ ಸಚಿವ ರಾಧಾಮೋಹನ್‌ ಸಿಂಗ್‌ ಅವರು ಕೃಷಿ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಡಾ.ಎಂ.ಎಸ್‌.ನಟರಾಜು ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.