ಬೆಂಗಳೂರು:ಕನ್ನಡ ಅಧ್ಯಯನ ಪೀಠ ಆರಂಭಿಸಲು ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ ಆಸಕ್ತಿ ತೋರಿದ್ದು, ವಿ.ವಿ.ಗೆ ಅಗತ್ಯ ಸಹಕಾರ ನೀಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಿದ್ಧವಿದೆ ಎಂದು ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ತಿಳಿಸಿದರು.
`ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನ ದೊರೆತಿರುವ ಕಾರಣ ಭಾಷೆಗೆ ಸಂಬಂಧಿಸಿದ ಯೋಜನೆಗೆ ಕೇಂದ್ರ ಸರ್ಕಾರ 1.5 ಕೋಟಿ ರೂ ಮಂಜೂರು ಮಾಡಿದೆ~ ಎಂದು ತಿಳಿಸಿದರು. ಕನ್ನಡೇತರರಿಗೆ ಕನ್ನಡ ಕಲಿಸುವ ಕೇಂದ್ರಗಳನ್ನು ರಾಜ್ಯದ ವಿವಿಧೆಡೆ ಆರಂಭಿಸಲಾಗಿದೆ. ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಕಲಿಸಲು ಅಲ್ಲಿಯೂ ಕೇಂದ್ರ ಆರಂಭಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.