ಬಿಡದಿ (ರಾಮನಗರ): ಮಾಗಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ ಪರ ಚಿತ್ರನಟಿ ಪೂಜಾ ಗಾಂಧಿ ಗುರುವಾರ ಪಟ್ಟಣದಲ್ಲಿ ಮತಯಾಚನೆ ಮಾಡಿದರು.
ಈ ಸಂದರ್ಭ ಮಾತನಾಡಿದ ಅವರು, ‘ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಜನರು ಬೇಸತ್ತಿದ್ದು, ಜೆಡಿಎಸ್ನತ್ತ ಮುಖ ಮಾಡುತ್ತಿದ್ದಾರೆ. ಈ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.