ಬೆಂಗಳೂರು: ‘ಮಡಿಕೇರಿ ವಿಧಾನಸಭಾಕ್ಷೇತ್ರದಲ್ಲಿ ಗೆಲುವಿಗೆ ಅಲ್ಪಸಂಖ್ಯಾತ ಮತಗಳೇ ನಿರ್ಣಾಯಕ. ಹೀಗಾಗಿ, ಆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನನಗೇ ಟಿಕೆಟ್ ನೀಡಬೇಕು’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಎಂ.ಎ. ಮನ್ಸೂರ್ ಅಹ್ಮದ್ ಒತ್ತಾಯಿಸಿದರು.
ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಡಿಕೇರಿಯಲ್ಲಿ 42 ಸಾವಿರಕ್ಕೂ ಅಧಿಕ ಅಲ್ಪಸಂಖ್ಯಾತರಿದ್ದಾರೆ.ಆದರೂ, 16 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಅಲ್ಲಿ ಸೋಲಾಗುತ್ತಿದೆ. ಈ ಬಾರಿ ಅಲ್ಲಿಂದ ಸ್ಪರ್ಧಿಸಿ ಪಕ್ಷಕ್ಕೆ ಗೆಲುವ ತಂದು ಕೊಡುವೆ. ಟಿಕೆಟ್ಗಾಗಿ ಸಲ್ಲಿಸಿರುವ ಅರ್ಜಿಯನ್ನು ಪಕ್ಷ ಪರಿಗಣಿಸಬೇಕು’ ಎಂದರು.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 15 ರಷ್ಟು ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.