ADVERTISEMENT

ಟೆಂಪೊ ಡಿಕ್ಕಿ: ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2013, 20:02 IST
Last Updated 8 ಏಪ್ರಿಲ್ 2013, 20:02 IST

ಹೊಸಕೋಟೆ: ಕೋಲಾರ ರಸ್ತೆಯ ಕೊಳತೂರು ಗೇಟ್ ಬಳಿ ಸರಕು ಸಾಗಣೆ ಟೆಂಪೊ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.

ಕ್ಯಾಲನೂರಿನ ಕೆ.ರಮೇಶ್ (37) ಮೃತಪಟ್ಟ ವ್ಯಕ್ತಿ. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಅವರು ತಾಲ್ಲೂಕಿನ ಹೆತ್ತಕ್ಕಿಯಲ್ಲಿರುವ ಸಂಬಂಧಿಕರನ್ನು ನೋಡಲು ಬೈಕ್‌ನಲ್ಲಿ ಬರುತ್ತಿದ್ದಾಗ ವೇಗವಾಗಿ ಬಂದ ಟೆಂಪೊ ಹಿಂಭಾಗದಿಂದ ಡಿಕ್ಕಿ ಹೊಡೆಯಿತು. ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.