ADVERTISEMENT

ಡಿವಿಎಸ್ ರಾಜೀನಾಮೆ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2012, 19:30 IST
Last Updated 9 ಜುಲೈ 2012, 19:30 IST

ಹೊಸಕೋಟೆ: ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ರಾಜೀನಾಮೆ ಪಡೆದಿರುವ ಬಿಜೆಪಿ ಹೈಕಮಾಂಡ್‌ನ ಕ್ರಮದ ವಿರುದ್ಧ ಹೊಸಕೋಟೆ ತಾಲ್ಲೂಕು ಕೆಂಪೇಗೌಡ ಒಕ್ಕಲಿಗರ ಸಂಘದ ಸದಸ್ಯರು ಹೊಸಕೋಟೆ- ಚಿಂತಾಮಣಿ ರಸ್ತೆಯ ಪಿಲ್ಲಗುಂಪೆ ಬಳಿ ಸೋಮವಾರ ರಸ್ತೆ ತಡೆ ನಡೆಸಿದರು.

ಸುಮಾರು ಅರ್ಧ ಗಂಟೆ ಕಾಲ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಬಿಜೆಪಿ ಹೈಕಮಾಂಡ್ ವಿರುದ್ಧ ಘೋಷಣೆಗಳನ್ನು ಕೂಗಿದರು. `ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿಯಲ್ಲಿ ಜಾತಿ ರಾಜಕೀಯ ಹುಟ್ಟು ಹಾಕಿದ್ದಲ್ಲದೆ ಮುಖ್ಯಮಂತ್ರಿಗಳ ಪದಚ್ಯುತಿಗೆ ಪಿತೂರಿ ನಡೆಸಿದರು~ ಎಂದು ಪ್ರತಿಭಟನಾಕಾರರು ದೂರಿದರು.

ಸಚಿವ ರೇಣುಕಾಚಾರ್ಯ, ವಿರುದ್ಧ ಧಿಕ್ಕಾರ ಕೂಗಿ ಯಡಿಯೂರಪ್ಪ ಅವರ ಪ್ರತಿಕೃತಿ ದಹನ ಮಾಡಿದರು.
ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತೇಗೌಡ, ಪ್ರಧಾನ ಕಾರ್ಯದರ್ಶಿ ರಾಜಗೋಪಾಲ್, ಮುಖಂಡರಾದ ನಂಜುಂಡೇಗೌಡ, ಗಣೇಶ್‌ಗೌಡ, ಸತೀಶ್, ಹನುಮಂತರೆಡ್ಡಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.