ADVERTISEMENT

ತರಬೇತಿ ಅವಧಿ ಸದುಪಯೋಗಕ್ಕೆ ಕರೆ

‘ವಿಂಟರ್‌ ಸ್ಕೂಲ್‌’ ಇಂಟರ್ನ್‌­­ಶಿಪ್‌ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2013, 20:00 IST
Last Updated 10 ಡಿಸೆಂಬರ್ 2013, 20:00 IST

ಬೆಂಗಳೂರು: ‘ವಿದ್ಯಾರ್ಥಿಗಳು ತರಬೇತಿ ಅವಧಿಯನ್ನು ಸದುಪಯೋಗಪಡಿಸಿಕೊಂಡು ಹೆಚ್ಚಿನ ಸಂಶೋಧನೆಗೆ ಮುಂದಾಗಬೇಕು’ ಎಂದು ಎಂ.ಎಸ್‌.ರಾಮಯ್ಯ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಸ್‌.ವೈ.­ಕುಲಕರ್ಣಿ ಹೇಳಿದರು.

ಎಂ.ಎಸ್‌.ರಾಮಯ್ಯ ತಾಂತ್ರಿಕ ಮಹಾವಿದ್ಯಾಲಯ ಮತ್ತು ಅಮೆರಿಕದ ಕಾರ್ನೆಗಿ ಮೆಲಾನ್‌ ವಿಶ್ವವಿದ್ಯಾಲಯದ ಸಹ­ಯೋಗ­ದಲ್ಲಿ ಆಯೋಜಿಸಿರುವ ‘ವಿಂಟರ್‌ ಸ್ಕೂಲ್‌’  ಇಂಟರ್ನ್‌­­ಶಿಪ್‌ ಕಾರ್ಯಕ್ರಮವನ್ನು  ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಈ ರೀತಿಯ ತರಬೇತಿ ಕಾರ್ಯಕ್ರಮಗಳು ವಿದ್ಯಾರ್ಥಿ­ಗಳನ್ನು ಹೆಚ್ಚಿನ ಕಲಿಕೆಗೆ ಪ್ರೋತ್ಸಾಹಿಸುತ್ತವೆ. 15 ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ನವದೆಹಲಿ, ಮುಂಬೈ, ಹೈದರಾ­ಬಾದ್‌ ಸೇರಿದಂತೆ ವಿವಿಧ ಐಐಟಿ ಮತ್ತು ಎನ್‌ಐಟಿ ಕಾಲೇಜು­ಗಳ 60 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು.

ಕಾರ್ನೆಗಿ ಮೆಲಾನ್‌ ವಿಶ್ವವಿದ್ಯಾಲಯದ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಪ್ರಾಧ್ಯಾಪಕ ಡಾ.ಭಿಕ್ಷಾರಾಜ್‌ ಮಾತ­ನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಹೊರಹಾಕಲು ಇದು ಉತ್ತಮ ಅವಕಾಶವಾಗಿದೆ ಎಂದು ಅವರು ಹೇಳಿದರು.

ತರಬೇತಿ ಅವಧಿಯಲ್ಲಿ ಆಯ್ದ ವಿಷಯಗಳ  ಕುರಿತು ವಿದ್ಯಾರ್ಥಿಗಳು ಸಂಶೋಧನೆ ನಡೆಸಲಿದ್ದು ಅಂತಿಮ ದಿನ ಸಂಶೋಧನಾ ಪ್ರಬಂಧವನ್ನು ಮಂಡಿಸಲಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.