ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಗಾಂಜಾ ಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಸಿಬ್ಬಂದಿ ಬಂಧಿಸಿದ್ದಾರೆ.
ನಗರದಿಂದ ಮುಂಬೈ ಮಾರ್ಗವಾಗಿ ದೋಹಾಕ್ಕೆ ಹೊರಟಿದ್ದ ಪ್ರಯಾಣಿಕನನ್ನು ಸಿಐಎಸ್ಎಫ್ ಸಿಬ್ಬಂದಿ ತಪಾಸಣೆಗೆ ಒಳಪಡಿಸಿದ್ದರು. ಆರೋಪಿಯ ಬ್ಯಾಗ್ನಲ್ಲಿದ್ದ ತಿನಿಸುಗಳ ಪೊಟ್ಟಣಗಳ ಒಳಗೆ ಗಾಂಜಾ ಪೊಟ್ಟಣಗಳನ್ನು ಬಚ್ಚಿಟ್ಟಿದ್ದನ್ನು ಪತ್ತೆ ಹಚ್ಚಿದ್ದರು. ನಂತರ ಆರೋಪಿಯನ್ನು ಬಂಧಿಸಿ, ಮಾದಕ ವಸ್ತು ಕಳ್ಳಸಾಗಣೆ ನಿಯಂತ್ರಣ ದಳದ (ಎನ್ಸಿಬಿ) ವಶಕ್ಕೆ ಒಪ್ಪಿಸಿದ್ದಾರೆ.
‘ಆರೋಪಿಯಿಂದ 4.7 ಕೆ.ಜಿ ಗಾಂಜಾ ಜಪ್ತಿ ಮಾಡಿದ್ದೇವೆ. ಆತ ಕೊಚ್ಚಿನ್ ನಿವಾಸಿ ಎಂಬುದು ಗೊತ್ತಾಗಿದೆ. ನ್ಯಾಯಾಂಗ ಬಂಧನಕ್ಕೆ ನೀಡಿದ್ದೇವೆ’ ಎಂದು ಎನ್ಸಿಬಿ ಅಧಿಕಾರಿಯೊಬ್ಬರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.