ADVERTISEMENT

ತಿರುಪತಿಗೆ ಹೊರಟ 7 ಜನರ ಸಾವು

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2011, 19:30 IST
Last Updated 10 ಅಕ್ಟೋಬರ್ 2011, 19:30 IST

ಸುರಪುರ (ಯಾದಗಿರಿ ಜಿಲ್ಲೆ): ವೆಂಕಟೇಶ್ವರನ ದರ್ಶನ ಪಡೆಯಲು ಸುರಪುರದಿಂದ ತಿರುಪತಿಗೆ ಹೊರಟಿದ್ದ ಏಳು ಜನ ಭಕ್ತರು ಸೋಮವಾರ ಬೆಳಗಿನ ಜಾವ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇತರ ನಾಲ್ವರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಇವರು ಪ್ರಯಾಣಿಸುತ್ತಿದ್ದ ಜೀಪಿಗೆ ಆಂಧ್ರಪ್ರದೇಶದ ಕರ್ನೂಲ್ ಸಮೀಪದ ನಂದ್ಯಾಲದ ಹತ್ತಿರ ಟೂರಿಸ್ಟ್ ಬಸ್ ಎದುರಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.