ಕೃಷ್ಣರಾಜಪುರ: ಬಿಬಿಎಂಪಿಯಿಂದ ವಿಜನಾಪುರ ಗ್ರಾಮದ ಉದ್ಯಾನದ ಆವರಣದಲ್ಲಿ ಆರಂಭಿಸಿದ ನೂತನ ತೆರಿಗೆ ಪಾವತಿ ಕೇಂದ್ರವನ್ನು ಪಾಲಿಕೆ ಸದಸ್ಯ ಪಿ.ಸುಕುಮಾರ್ ಅವರು ಉದ್ಘಾಟಿಸಿದರು.
ವಾರ್ಡ್ ವ್ಯಾಪ್ತಿಯಲ್ಲಿ ಸುಮಾರು 30 ಸಾವಿರ ಜನರು ಸಕಾಲದಲ್ಲಿ ತೆರಿಗೆ ಪಾವತಿಸಲು ಇದರಿಂದ ಅನುಕೂಲವಾಗಲಿದೆ ಎಂದು ಹೇಳಿದರು.
ಈ ಕೇಂದ್ರದಲ್ಲಿ ಜನರು ದೂರು ನೀಡಬಹುದು. ದೂರುಗಳ ತ್ವರಿತ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಕೇಂದ್ರದ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅವರು ಕೋರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.