ADVERTISEMENT

ದಾರಿ ತಪ್ಪಿಸುತ್ತಿರುವವರ ಸರಿಪಡಿಸುವೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2012, 19:30 IST
Last Updated 23 ಜನವರಿ 2012, 19:30 IST

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ದಾರಿತಪ್ಪಿಸುವಂತಹ ಹೇಳಿಕೆ ನೀಡುತ್ತಿರುವ ಸಚಿವ ಮತ್ತು ಶಾಸಕರನ್ನು ಸರಿಪಡಿಸುತ್ತೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ತೃಪ್ತಿ ಪಡಿಸಲು ಸಚಿವ ರೇಣುಕಾಚಾರ್ಯ ಮತ್ತು ಶಾಸಕ ಸುರೇಶಗೌಡ ಅವರು ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಅವರನ್ನು ಕರೆದು ಚರ್ಚಿಸಿ ಎಚ್ಚರಿಕೆ ನೀಡುವುದಾಗಿ ಹೇಳಿದರು.ಪಕ್ಷ ಸಂಘಟನೆ ಮತ್ತು ಗೊಂದಲ ನಿವಾರಣೆಗೆ ಫೆ.13 ಮತ್ತು 14ರಂದು ಬೆಂಗಳೂರಿನಲ್ಲಿ  ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರಿಗೆ ಅಭ್ಯಾಸ ವರ್ಗ ಆಯೋಜಿಸಿರುವುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.