ADVERTISEMENT

ದೆಹಲಿಗೆ ಬರಲು ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2012, 19:50 IST
Last Updated 7 ಜುಲೈ 2012, 19:50 IST

ಬೆಂಗಳೂರು: ಪಕ್ಷದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳು ಮತ್ತು ರಾಜ್ಯ ರಾಜಕೀಯದಲ್ಲಿನ ವಿದ್ಯಮಾನಗಳ ಕುರಿತು ಚರ್ಚಿಸಲು ಸೋಮವಾರ ದೆಹಲಿಗೆ ಬರುವಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ವರಿಷ್ಠರು ಸೂಚನೆ ನೀಡಿದ್ದಾರೆ.

ಸೋಮವಾರ ಬೆಳಿಗ್ಗೆಯೇ ಇಬ್ಬರೂ ನಾಯಕರು ದೆಹಲಿಗೆ ತೆರಳುವರು. ರಾಜ್ಯದಲ್ಲಿ ಪಕ್ಷ ಬಲಡಿಸುವುದು, ಚುನಾವಣಾ ತಯಾರಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ನಾಯಕತ್ವದಲ್ಲಿ ಬದಲಾವಣೆ ಬೇಡಿಕೆ ಹೆಚ್ಚುತ್ತಿರುವುದು ಸೇರಿದಂತೆ ಪಕ್ಷದ ಆಂತರಿಕ ವಲಯದಲ್ಲಿ ಇತ್ತೀಚೆಗೆ ನಡೆದ ಹಲವು ಬೆಳವಣಿಗೆಗಳ ವಿಷಯವೂ ಚರ್ಚೆಗೆ ಬರುವ ಸಂಭವವಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.