ADVERTISEMENT

ನಡೆದು ಬಂದ ನ್ಯಾಯಮೂರ್ತಿ!

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2011, 20:20 IST
Last Updated 24 ಫೆಬ್ರುವರಿ 2011, 20:20 IST

ಬೆಂಗಳೂರು: ಬಜೆಟ್ ಮಂಡನೆಗಾಗಿ ಗುರುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾಲ್ನಡಿಗೆಯಲ್ಲಿ ರೈತರೊಂದಿಗೆ ಆಗಮಿಸಿದರೆ, ನ್ಯಾಯಮೂರ್ತಿ ಡಿ.ವಿ. ಶೈಲೇಂದ್ರಕುಮಾರ್ ಅವರು ಹೈಕೋರ್ಟ್‌ಗೆ ಕಾಲ್ನಡಿಗೆಯಲ್ಲಿಯೇ ಆಗಮಿಸಿ ಅಚ್ಚರಿ ಮೂಡಿಸಿದರು!

ಸಂಚಾರ ದಟ್ಟಣೆಯ  ಕಿರಿಕಿರಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನ್ಯಾಯಮೂರ್ತಿಗಳು ಸ್ಯಾಂಕಿ ರಸ್ತೆಯಲ್ಲಿರುವ ತಮ್ಮ ನಿವಾಸದಿಂದ ಸುಮಾರು 2 ಕಿ.ಮೀ ದೂರ ಕಾಲ್ನಡಿಗೆಯಲ್ಲಿಯೇ ಆಗಮಿಸಿದರು.

ಕಳೆದ ಜೂನ್‌ನಲ್ಲಿ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ ಅವರು ಹೈಕೋರ್ಟ್ ಅವಧಿ ಮುಗಿದ ಮೇಲೆ ಸಂಜೆ ಬಾಲಬ್ರೂಯಿ ಅತಿಥಿ ಗೃಹದ ಬಳಿ ಇರುವ ಮನೆಗೆ ನಡೆದು ಹೋಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.