ADVERTISEMENT

ನದಿಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2018, 19:37 IST
Last Updated 19 ಮಾರ್ಚ್ 2018, 19:37 IST

ಹುಣಸೂರು: ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಪ್ರೇಮಿಗಳು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಗಾವಡಗೆರೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಕೆ.ಆರ್‌.ನಗರದ ಕುವೆಂಪು ಬಡಾವಣೆ ನಿವಾಸಿ ಜಮುನಾ (28) ಮತ್ತು ಹುಣಸೂರು ತಾಲ್ಲೂಕಿನ ತೊಂಡಾಳು ಗ್ರಾಮದ ನಿವಾಸಿ ದಿಲೀಪ್‌ (22) ಆತ್ಮಹತ್ಯೆ ಮಾಡಿಕೊಂಡವರು.

ನರ್ಸಿಂಗ್ ಕೋರ್ಸ್‌ ಮುಗಿಸಿದ್ದ ಜಮುನಾ, ಪದವೀಧರನಾದ ದಿಲೀಪ್‌ ಇವರಿಬ್ಬರೂ ದೂರದ ಸಂಬಂಧಿಕರು. ವಿವಾಹವಾಗಲು ಪೋಷಕರ ಮನವೊಲಿಸುವ ಯತ್ನಿಸಿದ್ದರು.

ADVERTISEMENT

ಆದರೆ, ಪೋಷಕರು ವಯಸ್ಸಿನ ಅಂತರ ನೆಪವೊಡ್ಡಿ ವಿವಾಹಕ್ಕೆ ತೆರೆ ಎಳೆದಿದ್ದರು. ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.