ಬೆಂಗಳೂರು: ‘ಕರ್ನಾಟಕ ವಾಯ್ಸ್ ಆಫ್ ಫಿಸಿಕಲಿ ಹ್ಯಾಂಡಿಕ್ಯಾಪ್ಡ್ ಸಂಸ್ಥೆಯ ವತಿಯಿಂದ ಇದೇ ಶನಿವಾರ (ಡಿ. 21) ಅಂಗವಿಕಲರ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಎನ್.ಸುಧೀಂದ್ರ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರದ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ 10 ಸಾವಿರಕ್ಕೂ ಹೆಚ್ಚು ಅಂಗವಿಕಲರು ಭಾಗವಹಿಸಲಿದ್ದಾರೆ ಎಂದರು.
ಅಂಗವಿಕಲರಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು, ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಪ್ರಶಸ್ತಿ ಪಡೆದ ಅಂಗವಿಕಲರಿಗೆ ಪ್ರತಿ ತಿಂಗಳು ರೂ10 ಸಾವಿರ ಗೌರವಧನ ನೀಡಬೇಕು, ವಿವಿಧ ಇಲಾಖೆಗಳಲ್ಲಿ ದಿನಗೂಲಿ, ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಅಂಗವಿಕಲರ ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.