ADVERTISEMENT

ನಾಳೆ ಅಂಗವಿಕಲರ ಜಾಗೃತಿ ಅಭಿಯಾನ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2013, 19:30 IST
Last Updated 19 ಡಿಸೆಂಬರ್ 2013, 19:30 IST

ಬೆಂಗಳೂರು: ‘ಕರ್ನಾಟಕ ವಾಯ್ಸ್‌ ಆಫ್‌ ಫಿಸಿಕಲಿ ಹ್ಯಾಂಡಿಕ್ಯಾಪ್ಡ್‌ ಸಂಸ್ಥೆಯ ವತಿಯಿಂದ ಇದೇ ಶನಿವಾರ (ಡಿ. 21) ಅಂಗವಿಕಲರ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಎನ್‌.ಸುಧೀಂದ್ರ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರದ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣ­ದಲ್ಲಿ ಕಾರ್ಯಕ್ರಮ  ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ   ಉದ್ಘಾಟಿಸಲಿದ್ದಾರೆ ಎಂದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ 10 ಸಾವಿರಕ್ಕೂ ಹೆಚ್ಚು ಅಂಗವಿಕಲರು ಭಾಗವಹಿಸಲಿದ್ದಾರೆ ಎಂದರು.

ಅಂಗವಿಕಲರಿಗೆ ಪ್ರತ್ಯೇಕ ಸಚಿವಾ­ಲಯ ಸ್ಥಾಪಿಸಬೇಕು, ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಪ್ರಶಸ್ತಿ ಪಡೆದ ಅಂಗವಿಕಲರಿಗೆ ಪ್ರತಿ ತಿಂಗಳು ರೂ10 ಸಾವಿರ ಗೌರವಧನ ನೀಡಬೇಕು, ವಿವಿಧ  ಇಲಾಖೆಗಳಲ್ಲಿ ದಿನಗೂಲಿ, ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಅಂಗವಿಕಲರ ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.