ADVERTISEMENT

‘ನಿತ್ಯ 82 ಟನ್‌ ಜೈವಿಕ ತ್ಯಾಜ್ಯ ಉತ್ಪತ್ತಿ’

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2018, 20:05 IST
Last Updated 23 ಮಾರ್ಚ್ 2018, 20:05 IST
ಕಾರ್ಯಕ್ರಮವನ್ನು ಡಾ.ಎ.ರಮೇಶ್‌ ಉದ್ಘಾಟಿಸಿದರು. ವೈದ್ಯರ ಸಂಘದ ಅಧ್ಯಕ್ಷ ಡಾ.ಎಂ.ಜಯಪ್ರಸಾದ್‌, ವಿಭಾಗೀಯ ಅಧಿಕಾರಿ ಸಿ.ಎಂ.ಸತೀಶ್‌, ಹರ್ಷ ಸಮೂಹ ಸಂಸ್ಥೆಯ ಸಿಇಒ ಎಂ.ಸಿ.ನಾರಾಯಣಗೌಡ ಇದ್ದಾರೆ.
ಕಾರ್ಯಕ್ರಮವನ್ನು ಡಾ.ಎ.ರಮೇಶ್‌ ಉದ್ಘಾಟಿಸಿದರು. ವೈದ್ಯರ ಸಂಘದ ಅಧ್ಯಕ್ಷ ಡಾ.ಎಂ.ಜಯಪ್ರಸಾದ್‌, ವಿಭಾಗೀಯ ಅಧಿಕಾರಿ ಸಿ.ಎಂ.ಸತೀಶ್‌, ಹರ್ಷ ಸಮೂಹ ಸಂಸ್ಥೆಯ ಸಿಇಒ ಎಂ.ಸಿ.ನಾರಾಯಣಗೌಡ ಇದ್ದಾರೆ.   

ನೆಲಮಂಗಲ: ಜೈವಿಕ ವೈದ್ಯಕೀಯ ತ್ಯಾಜ್ಯ ಆಸ್ಪತ್ರೆಗಳಲ್ಲಷ್ಟೇ ಅಲ್ಲದೆ ಪ್ರತಿ ಮನೆಯಲ್ಲೂ ಉತ್ಪತ್ತಿಯಾಗುತ್ತಿದೆ. ತ್ಯಾಜ್ಯಗಳನ್ನು ವಿಂಗಡಿಸಿ ವಿಲೇವಾರಿ ಮಾಡುವುದರಿಂದ ಸಾಂಕ್ರಾಮಿಕ ರೋಗ ಹಾಗೂ ಇತರೆ ಅಪಾಯಗಳನ್ನು ತಪ್ಪಿಸಬಹುದು ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಅಧಿಕಾರಿ ಡಾ.ಎ.ರಮೇಶ್‌ ತಿಳಿಸಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪಟ್ಟಣದ ಹರ್ಷ ರಾಮಯ್ಯ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ‘ಜೈವಿಕ ವೈದ್ಯಕೀಯ ತ್ಯಾಜ್ಯ’ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಆಸ್ಪತ್ರೆಗಳು ನಾಯಿಕೊಡೆಗಳಂತೆ ಹುಟ್ಟಿಕೊಳ್ಳುತ್ತಿವೆ. ಶೇ 95 ರಷ್ಟು ಆಸ್ಪತ್ರೆಗಳು ಮಂಡಳಿಗೆ ಸಲ್ಲಿಸಬೇಕಾದ ವಾರ್ಷಿಕ ವರದಿಯನ್ನು ಸರಿಯಾಗಿ ಸಲ್ಲಿಸುತ್ತಿಲ್ಲ. ಇದು ಮುಂದುವರಿದರೆ ಕ್ರಮ ಜರುಗಿಸಲಾಗುವುದು’ ಎಂದರು.

ADVERTISEMENT

ಮಂಡಳಿಯ ಬೆಂಗಳೂರು ವಿಭಾಗಿಯ ಅಧಿಕಾರಿ ಸಿ.ಎಂ.ಸತೀಶ್‌, ‘ಜೈವಿಕ ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲಾಗುವುದು. ಬೆಂಗಳೂರಿನಲ್ಲಿ 3 ಸೇರಿದಂತೆ ರಾಜ್ಯದಲ್ಲಿ ಒಟ್ಟು 25 ಸಂಸ್ಕರಣಾ ಘಟಕಗಳಿವೆ. ರಾಜ್ಯದಲ್ಲಿ ಪ್ರತಿದಿನ 82 ಟನ್‌ಗಳಷ್ಟು ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಪ್ರಾಥಮಿಕ ಹಂತದಲ್ಲೇ ತ್ಯಾಜ್ಯವನ್ನು ನಿರ್ದಿಷ್ಟ ಬಣ್ಣದ ಬುಟ್ಟಿಗಳಲ್ಲಿ ವಿಂಗಡಿಸಿದರೆ ಸಂಸ್ಕರಣಾ ಪ್ರಕ್ರಿಯೆ ಸುಲಭವಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.