ADVERTISEMENT

ನೀರಿನ ಅದಾಲತ್‌ ಇಂದು

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2018, 19:23 IST
Last Updated 1 ಮಾರ್ಚ್ 2018, 19:23 IST

ಬೆಂಗಳೂರು: ಜಲಮಂಡಳಿಯ (ಪೂರ್ವ-1) ಉಪವಿಭಾಗದ ವ್ಯಾಪ್ತಿಗೆ ಬರುವ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಇದೇ 2ರಂದು ಬೆಳಿಗ್ಗೆ 9.30 ರಿಂದ 11ರವರೆಗೆ ನೀರಿನ ಅದಾಲತ್‍ ನಡೆಸಲಾಗುತ್ತದೆ.

ಕಲ್ಯಾಣನಗರ, ಓ.ಎಂ.ಬಿ.ಆರ್. ಲೇ ಔಟ್ ಮತ್ತು ಎಚ್.ಬಿ.ಆರ್. ಲೇಔಟ್ ಸೇವಾಠಾಣೆಗಳಿಗೆ ಸಂಬಂಧಿಸಿದ ವಿವಾದಗಳನ್ನು ಕಲ್ಯಾಣ ನಗರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಕಚೇರಿಯಲ್ಲಿ ಪರಿಶೀಲಿಸಿ ಬಗೆಹರಿಸಲಾಗುತ್ತದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT