ರಾಜರಾಜೇಶ್ವರಿನಗರ: ‘ಸೂಲಿಕೆರೆ ಪಂಚಾಯ್ತಿ ವ್ಯಾಪ್ತಿಯ ಹಳೇಬೈರೋಹಳ್ಳಿ, ಅರ್ಚಕರ ಬಡಾವಣೆ, ರಾಮಸಂದ್ರದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದ ಹಿನ್ನೆಲೆಯಲ್ಲಿ ಬೃಹತ್ ನೀರಿನ ಟ್ಯಾಂಕ್ ನಿರ್ಮಿಸಲಾಗಿದೆ’ ಎಂದು ಸೂಲಿಕೆರೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರಾಧಶ್ರೀನಿವಾಸ್ ತಿಳಿಸಿದರು.
₨50 ಲಕ್ಷ ವೆಚ್ಚದಲ್ಲಿ ಹಳೇಬೈರೋಹಳ್ಳಿಯಲ್ಲಿ ನಿರ್ಮಿಸಿರುವ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಉದ್ಘಾಟನೆ, ಅರ್ಚಕರ ಬಡಾವಣೆಯಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟನೆ, ರಾಮಸಂದ್ರದಲ್ಲಿ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಶಾಸಕ ಎಸ್.ಟಿ.ಸೋಮಶೇಖರ್, ಜಿ.ಪಂ ಅಧ್ಯಕ್ಷೆ ಇಂದಿರಮ್ಮ ನಾಗರಾಜು, ಸದಸ್ಯೆ ಸರ್ವಮಂಗಳ ಕೃಷ್ಣಪ್ಪ, ಪಂಚಾಯ್ತಿ ಸದಸ್ಯೆ ಗೌರಮ್ಮ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.