ADVERTISEMENT

ನೀರು ಪೂರೈಕೆ ಯೋಜನೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2012, 21:51 IST
Last Updated 27 ನವೆಂಬರ್ 2012, 21:51 IST
ಹೆಗ್ಗಡೆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಟರಾಯನಪುರ ಕ್ಷೇತ್ರ ಜೆಡಿ(ಎಸ್) ಘಟಕದ ವತಿಯಿಂದ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ಉಚಿತವಾಗಿ ಕುಡಿಯುವ ನೀರು ಸರಬರಾಜು ಮಾಡುವ ಕಾರ್ಯಕ್ಕೆ ಪಕ್ಷದ ಮುಖಂಡ ಜಯಗೋಪಾಲಗೌಡ ಚಾಲನೆ ನೀಡಿದರು. ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರಗೌಡ ಚಿತ್ರದಲ್ಲಿದ್ದಾರೆ
ಹೆಗ್ಗಡೆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಟರಾಯನಪುರ ಕ್ಷೇತ್ರ ಜೆಡಿ(ಎಸ್) ಘಟಕದ ವತಿಯಿಂದ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ಉಚಿತವಾಗಿ ಕುಡಿಯುವ ನೀರು ಸರಬರಾಜು ಮಾಡುವ ಕಾರ್ಯಕ್ಕೆ ಪಕ್ಷದ ಮುಖಂಡ ಜಯಗೋಪಾಲಗೌಡ ಚಾಲನೆ ನೀಡಿದರು. ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರಗೌಡ ಚಿತ್ರದಲ್ಲಿದ್ದಾರೆ   

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಜೆಡಿ(ಎಸ್) ಘಟಕದ ವತಿಯಿಂದ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ಉಚಿತವಾಗಿ ಕುಡಿಯುವ ನೀರು ಸರಬರಾಜು ಮಾಡುವ ಕಾರ್ಯಕ್ಕೆ ಪಕ್ಷದ ಮುಖಂಡ ಜಯಗೋಪಾಲಗೌಡ ಹೆಗ್ಗಡೆ ನಗರದ ಪಕ್ಷದ ಕಚೇರಿಯ ಸಮೀಪದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಯಕ್ಕೆ ಸರಿಯಾಗಿ ಮಳೆ ಬಾರದೆ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರು ಸಿಗದಂತಾಗಿದೆ. ಶ್ರೀಮಂತರು ಹಣತೆತ್ತು ನೀರು ಸರಬರಾಜು ಮಾಡಿಕೊಂಡರೆ, ಬಡಜನರು ನೀರಿಗಾಗಿ ಪರದಾಡುವಂತಾಗಿದೆ. ಇಂತಹ ಜನರಿಗೆ ಉಪಯೋಗವಾಗಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕ್ಷೇತ್ರದ ಜೆಡಿ(ಎಸ್) ಅಧ್ಯಕ್ಷ ಜೆ.ಎಂ.ಚದ್ರಪ್ಪ, ಪ್ರಧಾನ ಕಾರ್ಯದರ್ಶಿ ಎನ್. ವೇಣುಗೋಪಾಲ್, ಹಿರಿಯ ಉಪಾಧ್ಯಕ್ಷ ಜೋಸೆಫ್, ನಗರಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರಗೌಡ, ಮುಖಂಡರಾದ ಉಮೇಶ್, ಶ್ರೀನಿವಾಸ್ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.