ADVERTISEMENT

ನೀರು ಸರಬರಾಜು, ಒಳಚರಂಡಿ ಯೋಜನೆಗೆ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2014, 20:24 IST
Last Updated 8 ಜನವರಿ 2014, 20:24 IST

ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ಕ್ಷೇತ್ರದ ಪುಟ್ಟೇನಹಳ್ಳಿ ವಾರ್ಡ್‌ನ ದೊರೆಸಾನಿಪಾಳ್ಯದಲ್ಲಿ ₨30 ಲಕ್ಷ ವೆಚ್ಚದಲ್ಲಿ ಕಾವೇರಿ ನೀರು ಸರಬರಾಜು 4ನೇ ಹಂತದ ಯೋಜನೆ ಹಾಗೂ ಒಳಚರಂಡಿ ಕಾಮಗಾರಿಗೆ ಶಾಸಕ ಎಂ.ಸತೀಶ್‌ ರೆಡ್ಡಿ ಬುಧವಾರ ಗುದ್ದಲಿಪೂಜೆ ನೆರವೇರಿಸಿದರು.

‘ಈ ಯೋಜನೆಯಡಿ 27 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಲಾಗುವುದು’ ಎಂದು ಅವರು ತಿಳಿಸಿದರು.

ಬಿಬಿಎಂಪಿ ಸದಸ್ಯ ಎಲ್‌.ರಮೇಶ್‌, ಬೊಮ್ಮನಹಳ್ಳಿ ಬ್ಲಾಕ್‌ ಬಿಜೆಪಿ ಅಧ್ಯಕ್ಷ ಮೋಹನ್‌ರಾಜ್‌, ಜಲಮಂಡಳಿಯ ಅಧಿಕಾರಿಗಳಾದ ಮೂರ್ತಿ, ಪವನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.