
ಬೆಂಗಳೂರು: ಜಯನಗರ ನ್ಯಾಷನಲ್ ಪದವಿ ಕಾಲೇಜಿನ 5ನೇ ಘಟಿಕೋತ್ಸವದಲ್ಲಿ ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿ.ಸಿ.ಎ ಕೋರ್ಸ್ ಪೂರೈಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಮತ್ತು ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ನೀಡಿ ಗೌರವಿಸಲಾಯಿತು.
ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆ (ಎನ್ಐಎಎಸ್) ನಿರ್ದೇಶಕ ಡಾ. ಬಲದೇವ್ ರಾಜ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯ, ಆತ್ಮವಿಶ್ವಾಸ, ರಾಷ್ಟ್ರೀಯ ಭಾವನೆ ಬಿತ್ತದ ಶಿಕ್ಷಣ ವ್ಯರ್ಥವಾದದ್ದು. ಸಮಾಜದ ಋಣಭಾರ ತೀರಿಸುವಂತೆ ಪ್ರೇರೇಪಿಸುವ ಶಿಕ್ಷಣ ನೀಡಬೇಕು’ ಎಂದರು.
‘ದೇಸಿ ನೆಲೆಗಟ್ಟಿನ ಮೇಲೆ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಸನಕ್ಕೆ ಅನುಕೂಲವಾಗುವ ಗುಣಮಟ್ಟದ ಶಿಕ್ಷಣವನ್ನು ನ್ಯಾಷನಲ್ ಕಾಲೇಜು ಕಳೆದ ಒಂದು ಶತಮಾನದಿಂದ ನೀಡುತ್ತ ಬಂದಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.