ADVERTISEMENT

ಪಬ್‌-ಬಾರ್‌ಗಳ ಹಾವಳಿ: ವರದಿ ಸಲ್ಲಿಕೆಗೆ ಆದೇಶ

‍ಇಂದಿರಾ ನಗರದಲ್ಲಿ ಪಬ್‌-ಬಾರ್‌ಗಳ ಹಾವಳಿ ಆರೋಪ

​ಪ್ರಜಾವಾಣಿ ವಾರ್ತೆ
Published 6 ಜೂನ್ 2019, 20:23 IST
Last Updated 6 ಜೂನ್ 2019, 20:23 IST

ಬೆಂಗಳೂರು: ‘ಇಂದಿರಾನಗರ ಪ್ರದೇಶದಲ್ಲಿ ಪಬ್ ಮತ್ತು ಬಾರ್‌ಗಳಿಂದ ಆಗುತ್ತಿರುವ ಶಬ್ದ ಮಾಲಿನ್ಯ ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸಿ’ ಎಂದು ಹೈಕೋರ್ಟ್ ಪೊಲೀಸರಿಗೆ ನಿರ್ದೇಶಿಸಿದೆ.

ಈ ಕುರಿತಂತೆ, ‘ಡಿಫೆನ್ಸ್‌ ಕಾಲೋನಿ ನಿವಾಸಿಗಳ ಸಂಘ’ದ ಅಧ್ಯಕ್ಷ ಅಶೋಕ್ ಶರತ್‌ ಸೇರಿದಂತೆ ಒಟ್ಟು 20 ಜನರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಕೆ.ಜಿ.ರಾಘವನ್, ‘2019ರ ಮಾರ್ಚ್‌ 22ರಂದು ನ್ಯಾಯಪೀಠ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಆದೇಶಿಸಿದ್ದರೂ ಇನ್ನೂ ಅದನ್ನು ಪಾಲಿಸಿಲ್ಲ’ ಎಂದರು.

ADVERTISEMENT

ವಿಚಾರಣೆಯನ್ನು ಇದೇ 13ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.