ADVERTISEMENT

ಪರಿಶಿಷ್ಟರ ಕಲ್ಯಾಣಕ್ಕೆ ನಿಗಾ ಸಮಿತಿ: ಒತ್ತಾಯ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2013, 19:53 IST
Last Updated 22 ಸೆಪ್ಟೆಂಬರ್ 2013, 19:53 IST
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಕೊಡಿಗೇಹಳ್ಳಿ ಮುಖ್ಯ ರಸ್ತೆಯ ಸಹಕಾರ ನಗರದಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ರೈಲ್ವೆ ಪ್ರಯಾಣಿಕರ ಸವಲತ್ತುಗಳ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಚಲವಾಗಿ ನಾರಾಯಣಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಉಪಮೇಯರ್‌ ಎನ್‌.ಇಂದಿರಾ, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪರಿಶಿಷ್ಟಜಾತಿ ವಿಭಾಗದ ಅಧ್ಯಕ್ಷ ಎನ್‌.ಮಂಜುನಾಥ್‌, ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ರವಿಕುಮಾರ್‌,  ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಯೋಜಕ ವಿ.ನಾಗರಾಜ್‌  ಇತರರು ಚಿತ್ರದಲ್ಲಿದ್ದಾರೆ
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಕೊಡಿಗೇಹಳ್ಳಿ ಮುಖ್ಯ ರಸ್ತೆಯ ಸಹಕಾರ ನಗರದಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ರೈಲ್ವೆ ಪ್ರಯಾಣಿಕರ ಸವಲತ್ತುಗಳ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಚಲವಾಗಿ ನಾರಾಯಣಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಉಪಮೇಯರ್‌ ಎನ್‌.ಇಂದಿರಾ, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪರಿಶಿಷ್ಟಜಾತಿ ವಿಭಾಗದ ಅಧ್ಯಕ್ಷ ಎನ್‌.ಮಂಜುನಾಥ್‌, ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ರವಿಕುಮಾರ್‌, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಯೋಜಕ ವಿ.ನಾಗರಾಜ್‌ ಇತರರು ಚಿತ್ರದಲ್ಲಿದ್ದಾರೆ   

ಯಲಹಂಕ: ‘ರೈಲು ಪ್ರಯಾಣಿಕರ ಸವಲತ್ತುಗಳಿಗೆ ಯಾವುದೇ ರೀತಿಯ ಕೊರತೆಯಾಗದಂತೆ ಲಭ್ಯವಿರುವ ಎಲ್ಲ ಸೌಕರ್ಯಗಳನ್ನು ಒದಗಿಸಲು ಪ್ರಾಮಾ ಣಿಕ ಪ್ರಯತ್ನ ಮಾಡಲಾಗು ವುದು’ ಎಂದು ರಾಷ್ಟ್ರೀಯ ರೈಲ್ವೆ ಪ್ರಯಾಣಿಕರ ಸವಲತ್ತುಗಳ ಸಮಿತಿ ಅಧ್ಯಕ್ಷ ಚಲವಾದಿ ನಾರಾಯಣಸ್ವಾಮಿ ಹೇಳಿದರು.

ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್‌  ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಸಹಕಾರ ನಗರದಲ್ಲಿ ಈಚೆಗೆ ಆಯೋಜಿ ಸಿದ್ದ ಪದಾಧಿಕಾರಿಗಳ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪರಿಶಿಷ್ಟಜಾತಿ ವಿಭಾಗದ ಅಧ್ಯಕ್ಷ ಎನ್‌. ಮಂಜುನಾಥ್‌ ಮಾತನಾಡಿ, ‘ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣ ಕಾರ್ಯಕ್ರಮಗಳನ್ನು  ಪರಿಣಾಮಕಾರಿ ಯಾಗಿ ಅನುಷ್ಠಾನ ಮಾಡಲು ನಿಗಾ ಸಮಿತಿ ರಚಿಸಬೇಕು ಎಂದು ಮುಖ್ಯ ಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿದೆ’ ಎಂದರು. ವಿಧಾನ ಪರಿಷತ್‌ ಮಾಜಿ ಸದಸ್ಯೆ ಜಲಜಾನಾಯಕ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.