ADVERTISEMENT

ಪಾನಕ ಕುಡಿದ ಮಗು ಸಾವು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2013, 19:59 IST
Last Updated 20 ಏಪ್ರಿಲ್ 2013, 19:59 IST

ಬೆಂಗಳೂರು: ರಾಜಪೇಟೆ ಬಳಿಯ ವಾಲ್ಮೀಕಿನಗರದಲ್ಲಿನ ಬಂಡೆ ಗುಡಿಸಲು ಪ್ರದೇಶದಲ್ಲಿ ಶುಕ್ರವಾರ ರಾಮನವಮಿ ಹಬ್ಬದ ಪ್ರಯುಕ್ತ ದೇವಸ್ಥಾನವೊಂದರಲ್ಲಿ ಪಾನಕ ಹಾಗೂ ಮಜ್ಜಿಗೆ ಕುಡಿದ ಆರು ವರ್ಷದ ಮಗುವೊಂದು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಸ್ಥಳೀಯರು ಅಸ್ವಸ್ಥಗೊಂಡಿದ್ದಾರೆ.

ಬಂಡೆ ಗುಡಿಸಲು ಪ್ರದೇಶದಲ್ಲಿ ವಾಸವಿರುವ ಮುರುಗನ್ ಮತ್ತು ಪರಮೇಶ್ವರಿ ದಂಪತಿಯ ಗಂಗಾ ಎಂಬ ಹೆಣ್ಣು ಮಗು ಸಾವನ್ನಪ್ಪಿದೆ. ಅಸ್ವಸ್ಥರಲ್ಲಿ ಸುಮಾರು 20 ಮಕ್ಕಳು, 15 ಮಹಿಳೆಯರು ಮತ್ತು 15 ಮಂದಿ ಪುರುಷರು ಇದ್ದಾರೆ ಎಂದು ಚಾಮರಾಜಪೇಟೆ ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.