ಬೆಂಗಳೂರು: ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ನಿಷೇಧಿಸಬೇಕು’ ಎಂದು ಒತ್ತಾಯಿಸಿ ಹಿಂದೂ ಜಾಗರಣಾ ವೇದಿಕೆಯು ಇದೇ 28 ಹಾಗೂ 29 ರಂದು ವಾಹನ ಜಾಥಾ ಹಾಗೂ ಜನಜಾಗೃತಿ ಜಾಥಾ ಹಮ್ಮಿಕೊಂಡಿದೆ.
ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ರಾಜ್ಯ ಖಜಾಂಚಿ ಆರ್.ನಾಗೇಂದ್ರ ಪ್ರಸಾದ್, ‘28ರಂದು ಮಂಗಳೂರಿನ ಮಣ್ಣಗುಡ್ಡೆಯ ಸಂಘನಿಕೇತನದಿಂದ ಹಾಗೂ 29ರಂದು ಬೆಂಗಳೂರಿನ ಪುರಭವನದಿಂದ ಹೊರಡುವ ವಾಹನ ಜಾಥಾವು ಸಂಜೆ ವೇಳೆಗೆ ಮೈಸೂರು ತಲುಪಲಿದೆ. ಬಳಿಕ ಅಲ್ಲಿನ ಕೋಟೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದೆ’ ಎಂದರು.
‘ಪಿಎಫ್ಐ ಸಂಘಟನೆಯು ದೇಶದ್ರೋಹಿ ಚಿಂತನೆ ಹೊಂದಿದೆ. ರಾಜ್ಯದಲ್ಲಿ ನಡೆದ ಹಿಂದೂಗಳ ಹತ್ಯೆಗೆ ಆ ಸಂಘಟನೆಯೇ ಕಾರಣ. ಪಿಎಫ್ಐ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಾಥಾ ಆಯೋಜಿಸಿದ್ದೇವೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.