ನೆಲಮಂಗಲ: ಸ್ಥಳೀಯ ಪುರಸಭೆಗೆ ನೂತನ ಅಧ್ಯಕ್ಷರಾಗಿ ಎನ್.ಆರ್. ಕೃಷ್ಣಮೂರ್ತಿ ಬುಧವಾರ ಸರ್ವಾನುಮತದಿಂದ ಆಯ್ಕೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಕೃಷ್ಣಮೂರ್ತಿ, ಉಳಿದ ಅಲ್ಪ ಅವಧಿಯಲ್ಲಿ ಎ್ಲ್ಲಲರ ಸಲಹೆ ಸಹಕಾರ ಪಡೆದು ಕುಡಿಯುವ ನೀರು, ಸ್ವಚ್ಛತೆ, ಪರಿಸರ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು. ಮಾಜಿ ಅಧ್ಯಕ್ಷ ನೆ.ಲ.ಗಿರಿಧರ್ ಮಾತನಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.