ADVERTISEMENT

ಪ್ರಗತಿ ಜ್ಞಾನ ಬಿತ್ತಲು ಸಲಹೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2013, 20:20 IST
Last Updated 12 ಜೂನ್ 2013, 20:20 IST

ಪೀಣ್ಯ ದಾಸರಹಳ್ಳಿ: `ಶಿಕ್ಷಣ ನೀಡುವಾಗಲೇ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಆಂತರಿಕ ಪ್ರಗತಿಯ ಜ್ಞಾನವನ್ನು ಬಿತ್ತಬೇಕು. ಆಗ ಸಾಮಾಜಿಕ ಪರಿವರ್ತನೆ ತರಲು ಸಾಧ್ಯವಾಗುತ್ತದೆ' ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದರು.

ಮಂಜುನಾಥ ಸೇವಾ ಸಂಸ್ಥೆಯ ಆಶ್ರಯದಲ್ಲಿ ಪೀಣ್ಯದಲ್ಲಿ ಬುಧವಾರ ನಡೆದ ವಿದ್ಯಾ ಸೌಧ ಪಬ್ಲಿಕ್ ಸ್ಕೂಲ್‌ನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, `ಪುರಾತನ ಕಾಲದಲ್ಲಿ ಭಾರತೀಯ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿದ್ದ ವಿದೇಶಿಯರ ಸಂಖ್ಯೆ ದೊಡ್ಡದು ಇತ್ತು. ವಿಜ್ಞಾನದ ಬೆಳವಣಿಗೆಯಿಂದ ಭಾರತೀಯರು ವಿದೇಶದಲ್ಲಿ ಶಿಕ್ಷಣ ಪಡೆಯುವ ಸ್ಥಿತಿ ನಿರ್ಮಾಣವಾಯಿತು' ಎಂದರು.

`ಶಿಕ್ಷಣ ಸಂಸ್ಥೆಗಳು ಭಾರತೀಯ ಸಂಸ್ಕೃತಿ, ಪರಂಪರೆಯ ಬಗ್ಗೆ ಅರಿವು ಮೂಡಿಸಬೇಕು. ಆಗ ವಿದ್ಯಾರ್ಥಿಗಳು ಸಮಾಜಮುಖಿಯಾಗುತ್ತಾರೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.