ADVERTISEMENT

ಪ್ರತಿಭಟನೆ ಹಿಂಪಡೆದ ಭೂಮಾಪಕರು

​ಪ್ರಜಾವಾಣಿ ವಾರ್ತೆ
Published 20 ಜುಲೈ 2013, 19:59 IST
Last Updated 20 ಜುಲೈ 2013, 19:59 IST

ಬೆಂಗಳೂರು: ಕಂದಾಯ ಇಲಾಖೆಯ ಭೂ ಮಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕೆಂದು ಒತ್ತಾಯಿಸಿ ಅಭ್ಯರ್ಥಿಗಳು ನಗರದ ಬನಪ್ಪ ಉದ್ಯಾನದಲ್ಲಿ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಶುಕ್ರವಾರ ವಾಪಸ್ ಪಡೆದಿದ್ದಾರೆ.

`ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಶೀಘ್ರದಲ್ಲಿ ನೇಮಕಾತಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ವಾಪಸ್ ಪಡೆದಿದ್ದೇವೆ' ಎಂದು ಪ್ರತಿಭಟನಾ ನಿರತ ಶಿವನಗೌಡ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.