ಬೆಂಗಳೂರು: ಮಲ್ಲೇಶ್ವರದಲ್ಲಿ ಪೆರುಮಾಳ್ (35) ಎಂಬುವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾಮಾಕ್ಷಿಪಾಳ್ಯ ಸಮೀಪದ ಕಾವೇರಿಪುರದಲ್ಲಿ ಶನಿವಾರ ರಾತ್ರಿ ರಾಧಾ (22) ಎಂಬುವರು ನೇಣು ಹಾಕಿಕೊಂಡಿದ್ದಾರೆ. ಹೂ ವ್ಯಾಪಾರ ಮಾಡುತ್ತಿದ್ದ ಪೆರುಮಾಳ್, ಪತ್ನಿ ಜಯಶ್ರೀ ಮತ್ತು ಮಗಳ ಜತೆ ಮಲ್ಲೇಶ್ವರ 13ನೇ ಅಡ್ಡರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಪತ್ನಿ ಮತ್ತು ಮಗಳು ಬೆಳಿಗ್ಗೆ ಹೊರಗೆ ಹೋಗಿದ್ದಾಗ ಅವರು ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ. ಮಲ್ಲೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ.
ಮತ್ತೊಂದು ಪ್ರಕರಣ: ರಾಧಾ ಅವರ ಮದುವೆಯಾಗಿ ಆರು ವರ್ಷವಾಗಿತ್ತು. ಪತಿ ಉಲ್ಲಾಸ್್ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದಾರೆ. ಕುಟುಂಬದವರು ನಿದ್ರೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಧಾ ಅವರು ಕೊಠಡಿಯೊಂದರಲ್ಲಿ ನೇಣು ಹಾಕಿಕೊಂಡಿದ್ದಾರೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ವರದಕ್ಷಿಣೆ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.