ಬೆಂಗಳೂರು: ಪೊಲೀಸ್ ಕಂಪ್ಯೂಟರ್ ವಿಭಾಗದ ಎಡಿಜಿಪಿ ಪ್ರವೀಣ್ ಸೂದ್ ಅವರಿಗೆ ಹೆಚ್ಚುವರಿಯಾಗಿ ರಾಜ್ಯ ಪೊಲೀಸ್ ಆಡಳಿತ ವಿಭಾಗದ ಎಡಿಜಿಪಿ ಹೊಣೆ ನೀಡಿ ಹೊರಡಿಸಿದ್ದ ಆದೇಶವನ್ನು ತಡೆ ಹಿಡಿಯಲಾಗಿದೆ.
ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಬಿಪಿನ್ ಗೋಪಾಲಕೃಷ್ಣ ಅವರಿಗೆ ಹೆಚ್ಚುವರಿಯಾಗಿ ಆಡಳಿತ ವಿಭಾಗದ ಹೊಣೆ ಹೊರಿಸಲಾಗಿತ್ತು ಚುನಾವಣಾ ಸಮಯವಾದ ಕಾರಣ ಎರಡೂ ಹುದ್ದೆಗಳನ್ನು ನಿರ್ವಹಿಸುವುದು ಕಷ್ಟ ಎಂದು ಗೊತ್ತಾದ ಕಾರಣ ಅವರ ಬದಲಾಗಿ ಸೂದ್ ಅವರಿಗೆ ಆ ಜವಾಬ್ದಾರಿ ವಹಿಸಲು ಸರ್ಕಾರ ತೀರ್ಮಾನಿಸಿತ್ತು.
ಈ ಕುರಿತ ಆದೇಶ ಶನಿವಾರ ಹೊರಬಿದ್ದ ನಂತರ ತಡೆಹಿಡಿದಿದ್ದು, ಚುನಾವಣಾ ಆಯೋಗದ ಒಪ್ಪಿಗೆ ಸಿಕ್ಕ ನಂತರ ಅದನ್ನು ಜಾರಿ ಮಾಡಲು ನಿರ್ಧರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.