ADVERTISEMENT

ಬಗರ್‌ ಹುಕುಂ ಸಾಗುವಳಿ ಸಕ್ರಮ ಸರ್ಕಾರಿ ಆದೇಶ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2018, 19:29 IST
Last Updated 27 ಮಾರ್ಚ್ 2018, 19:29 IST

ಬೆಂಗಳೂರು: ಬಗರ್ ಹುಕುಂ ಸಾಗುವಳಿ ಮಾಡುತ್ತಿರುವವರ ಕೃಷಿ ಭೂಮಿ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಧಿ ನೀಡುವ ಸರ್ಕಾರಿ ಆದೇಶ ಹೊರಬಿದ್ದಿದೆ.

ವಿಧಾನಮಂಡಲದ ಒಪ್ಪಿಗೆ ಪಡೆದಿದ್ದ ವಿಧೇಯಕಕ್ಕೆ ರಾಜ್ಯಪಾಲರು ಸಹಿ ಹಾಕಿದ್ದು, ಅಧಿಕೃತ ಆದೇಶ ಬಂದಿದೆ.

ಸಾಕಷ್ಟು ಸಂಖ್ಯೆಯಲ್ಲಿ ಬಗುರ್ ಹುಕುಂ ಸಾಗುವಳಿದಾರರು ಸಕ್ರಮಕ್ಕೆ ಅರ್ಜಿ ಸಲ್ಲಿಸಿಲ್ಲ. ಕಳೆದ ಬಾರಿ ಸಕ್ರಮಕ್ಕೆ ಅನೇಕರು ಅರ್ಜಿ ಸಲ್ಲಿಸಿದ್ದರೂ ಪ್ರಕ್ರಿಯೆ ಪೂರ್ಣ ಆಗಿರಲಿಲ್ಲ. ಅರ್ಜಿ ಸಲ್ಲಿಕೆ ಕಾಲಾವಕಾಶ ವಿಸ್ತರಿಸುವ ಉದ್ದೇಶದಿಂದ ಕಾಯ್ದೆ ತಿದ್ದುಪಡಿಗೆ ಮಸೂದೆ ಮಂಡಿಸಲಾಗಿತ್ತು. ಈಗ ಚುನಾವಣೆ ದಿನಾಂಕ ಪ್ರಕಟಗೊಂಡಿರುವುದರಿಂದ, ಚುನಾವಣೆ ಬಳಿಕ ಸಕ್ರಮಗೊಳಿಸುವ ಪ್ರಕ್ರಿಯೆಗೆ ಚಾಲನೆ ಸಿಗಲಿದೆ ಎಂದು ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.