ADVERTISEMENT

ಬಡ್ತಿ: ರಾಷ್ಟ್ರಪತಿ ಭೇಟಿಗೆ ನಿಯೋಗ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2017, 19:30 IST
Last Updated 8 ಡಿಸೆಂಬರ್ 2017, 19:30 IST
ಬಡ್ತಿ: ರಾಷ್ಟ್ರಪತಿ ಭೇಟಿಗೆ ನಿಯೋಗ
ಬಡ್ತಿ: ರಾಷ್ಟ್ರಪತಿ ಭೇಟಿಗೆ ನಿಯೋಗ   

ಮೈಸೂರು: ‘ಬಡ್ತಿ ಮೀಸಲಾತಿ ಕಾನೂನು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ. ಅಗತ್ಯಬಿದ್ದರೆ ನಿಯೋಗದಲ್ಲಿ ತೆರಳಿ ರಾಷ್ಟ್ರಪತಿಯನ್ನು ಭೇಟಿ ಮಾಡಲಾ
ಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಶುಕ್ರವಾರ ಹೇಳಿದರು.

ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಕಾಲೇಜು ಮತ್ತು ವಿದ್ಯಾರ್ಥಿನಿಲಯ ಕಟ್ಟಡಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ರಾಜ್ಯಪಾಲರು ಮಸೂದೆಗೆ ಅಂಕಿತ ಹಾಕದೆ ವಾಪಸ್‌ ಕಳುಹಿಸಿದ್ದು, ರಾಷ್ಟ್ರಪತಿ ಅಂಕಿತ ಅಗತ್ಯ ಎಂದು ಹೇಳಿದ್ದಾರೆ. ಈ ಸಂಬಂಧ ರಾಜ್ಯಪಾಲರನ್ನೂ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ’ ಎಂದರು.

‘ಬಡ್ತಿ ಮೀಸಲಾತಿ ಕಾನೂನು ಜಾರಿಗೆ ತರದಂತೆ ನನ್ನ ಹಾಗೂ ಸರ್ಕಾರದ ಮೇಲೆ ತೀವ್ರ ಒತ್ತಡ ಬಂದಿದೆ. ನಾನು ಯಾವುದೇ ಒತ್ತಡಕ್ಕೂ ಮಣಿದಿಲ್ಲ. ಕಾನೂನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ’ ಎಂದು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.