ADVERTISEMENT

ಬನ್ನೇರುಘಟ್ಟಕ್ಕೆ ಕ್ರಿಕೆಟಿಗ ಹರಭಜನ್ ಭೇಟಿ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2012, 19:30 IST
Last Updated 16 ಫೆಬ್ರುವರಿ 2012, 19:30 IST

ಆನೇಕಲ್: ಖ್ಯಾತ ಅಂತರರಾಷ್ಟ್ರೀಯ ಕ್ರಿಕೆಟ್‌ಪಟು ಹರಭಜನ್ ಸಿಂಗ್ ಗುರುವಾರ ತಾಲ್ಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿ ನೀಡಿದ್ದರು. 

  ಮಧ್ಯಾಹ್ನದ ವೇಳೆಗೆ ಉದ್ಯಾನಕ್ಕೆ ಆಗಮಿಸಿದ ಅವರು ಸಂಜೆ 5ಗಂಟೆಯವರೆಗೂ ಸುತ್ತಾಡಿದರು. ಉದ್ಯಾನದ ಸಫಾರಿ, ಚಿಟ್ಟೆ ಪಾರ್ಕ್ ಮತ್ತು ಮೃಗಾಲಯಗಳಿಗೆ ಭೇಟಿ ನೀಡಿ ಅಲ್ಲಿನ ಪ್ರಾಣಿಗಳನ್ನು ವೀಕ್ಷಿಸಿ ಆನಂದಿಸಿದರು.
ಬನ್ನೇರುಘಟ್ಟ ಜೈವಿಕ ಉದ್ಯಾನವನ ಕೈಗೊಂಡ ಪ್ರಾಣಿ ಸಂರಕ್ಷಣಾ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದಾಗಿ ಹರಭಜನ್ ತಿಳಿಸಿದರೆಂದು ಉದ್ಯಾನವನದ ಕಾರ್ಯನಿರ್ವಾಹಕ ಡಾ.ಆರ್.ರಾಜು ಹೇಳಿದರು.       
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.