ADVERTISEMENT

ಬನ್ನೇರುಘಟ್ಟದಲ್ಲಿ ನೀರಾನೆ ಮರಿ ಸಾವು

​ಪ್ರಜಾವಾಣಿ ವಾರ್ತೆ
Published 11 ಜೂನ್ 2011, 19:30 IST
Last Updated 11 ಜೂನ್ 2011, 19:30 IST

ಆನೇಕಲ್:ಬನ್ನೇರುಘಟ್ಟ ಜೈವಿಕ ಉದ್ಯಾನದ ನೀರಾನೆ ಕಾವೇರಿಗೆ ಬುಧವಾರ (ಜೂ 8) ಜನಿಸಿದ್ದ ಮರಿ ಗುರುವಾರ ಮೃತಪಟ್ಟಿದೆ.  ಮರಿ ಹಾಕಿದ ನಂತರ 24 ಗಂಟೆಗಳಾದರೂ ತಾಯಿ ಮರಿಗೆ ಹಾಲುಣಿಸದೆ ಇದ್ದುದರಿಂದ ಮೃತಪಟ್ಟಿರುವುದಾಗಿ ಉದ್ಯಾನದ ಅಧಿಕಾರಿಗಳು ತಿಳಿಸಿದ್ದಾರೆ.
 
ಕಾವೇರಿಗೆ ಇದು ಮೊದಲನೆ ಹೆರಿಗೆಯಾದ್ದರಿಂದ ಮರಿಯ ಆರೈಕೆ ಮಾಡುವಲ್ಲಿ ವಿಫಲವಾಗಿದೆ.ಉದ್ಯಾನ ವೈದ್ಯರು ಮರಿಯನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆಸಿದರೂ ತಾಯಿಯೇ ಸ್ಪಂದಿಸದಿದ್ದ ರಿಂದ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಆರ್.ರಾಜು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.