ಬೆಂಗಳೂರು: ಕ್ರಿಸ್ಮಸ್ ದಿನವಾದ ಮಂಗಳವಾರ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಎಂಟು ಸಾವಿರ ಜನರು ಭೇಟಿ ನೀಡಿದ್ದಾರೆ. ಸಾಮಾನ್ಯವಾಗಿ ಮಂಗಳವಾರ ಉದ್ಯಾನಕ್ಕೆ ರಜೆ ಇರುತ್ತದೆ. ಆದರೆ ಹೆಚ್ಚಿನ ಜನರ ಆಗಮನದ ನಿರೀಕ್ಷೆ ಇದ್ದುದರಿಂದ ಮಂಗಳವಾರ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗಿತ್ತು.
ಮಂಗಳವಾರ ಒಂದೇ ದಿನದ ಟಿಕೆಟ್ ಮಾರಾಟದಿಂದ 8 ಲಕ್ಷ ರೂಪಾಯಿ ಆದಾಯ ಬಂದಿದೆ. ಹೊಸ ವರ್ಷವೂ ಮಂಗಳವಾರದ ದಿನವೇ ಬಂದಿರುವುದರಿಂದ ಜನವರಿ ಒಂದರಂದು ಕೂಡಾ ಉದ್ಯಾನ ತೆರೆದಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.