ADVERTISEMENT

‘ಬಸವನಗುಡಿ ಕ್ಷೇತ್ರ ಕಾಮಗಾರಿಗಳಿಗೆ ₹10 ಕೋಟಿ’

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2017, 19:30 IST
Last Updated 3 ಅಕ್ಟೋಬರ್ 2017, 19:30 IST

ಬೆಂಗಳೂರು: ಬಸವನಗುಡಿ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಅನುಷ್ಠಾನಕ್ಕಾಗಿ ₹10 ಕೋಟಿ ಬಿಡುಗಡೆ ಮಾಡುವಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಅವರು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್ ಪ್ರಸಾದ್ ಅವರಿಗೆ ಸೂಚಿಸಿದರು.

ಕ್ಷೇತ್ರ ವ್ಯಾಪ್ತಿಯಲ್ಲಿ ‌ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಸಚಿವ ಜಾರ್ಜ್ ಮಂಗಳವಾರ ಪರಿಶೀಲನೆ ನಡೆಸಿದರು.

ಕಾಳಿದಾಸ ಬಸ್ ನಿಲ್ದಾಣದ ಬಳಿ ನಿರ್ಮಿಸುತ್ತಿರುವ ಮಳೆನೀರು ಚರಂಡಿ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ, ಮಾರಿಹಳ್ಳ ಮಳೆನೀರು ಕಾಲುವೆ ವೀಕ್ಷಿಸಿದರು. ಇದರ ಸಮೀಪವಿರುವ ಎರಡು ಅನಧಿಕೃತ ಗುಡಿಸಲುಗಳನ್ನು ತೆರವುಗೊಳಿಸಿ, ಕಾಲುವೆಯಲ್ಲಿ ತುಂಬಿರುವ ಹೂಳನ್ನು ತೆಗೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಮೇಯರ್ ಆರ್‌.ಸಂಪತ್ ರಾಜ್, ಉಪಮೇಯರ್ ಪದ್ಮಾವತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.