ಹೆಣ್ಣೂರು ಬಾಣಸವಾಡಿ: ಯುಪಿಎ ಸರ್ಕಾರ ಹಗರಣಗಳಲ್ಲಿ ಸಿಲುಕುವ ಮೂಲಕ ಜನಪರ ಆಡಳಿತ ನೀಡುವಲ್ಲಿ ವಿಫಲವಾಗಿದೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಹೇಳಿದರು.
ಹೆಣ್ಣೂರು, ಕಮ್ಮನಹಳ್ಳಿ, ಬಾಣಸವಾಡಿ, ಕಾಚರಕನಹಳ್ಳಿ ಭಾಗಗಳಲ್ಲಿ ಮನೆ ಮನೆಗೆ ಮತಯಾಚನೆ ಮಾಡಿ ಅವರು ಮಾತನಾಡಿದರು.
ಗಡಿಗಳಲ್ಲಿ ವಿರೋಧಿಗಳ ಉಪಟಳ ಹೆಚ್ಚಾದರೂ ಯುಪಿಎ ಸರ್ಕಾರ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದ ಅವರು, ಇದೆಲ್ಲದರ ಪರಿಣಾಮ ಕಾಂಗ್ರೆಸ್ ಪಕ್ಷ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪರಾಭವ ಅನುಭವಿಸಲಿದೆ ಎಂದು ಹೇಳಿದರು.
ಬಿಬಿಎಂಪಿ ಸದಸ್ಯರಾದ ಗೋವಿಂದರಾಜು, ಎಂ.ಸಿ. ಶ್ರೀನಿವಾಸ್, ಮುಖಂಡ ಎಂ .ಎನ್.ರೆಡ್ಡಿ, ಹೆಣ್ಣೂರು ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಭಕ್ತವತ್ಸಲಂ, ಕಾರ್ಯದರ್ಶಿ ಮುನಿರಾಜು ಸೇರಿದಂತೆ ನೂರಾರು ಮಂದಿ ಈ ಸಂದರ್ಭದಲ್ಲಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.