ADVERTISEMENT

ಬಿಬಿಎಂಪಿ ಆಯುಕ್ತ ಎತ್ತಂಗಡಿ

​ಪ್ರಜಾವಾಣಿ ವಾರ್ತೆ
Published 3 ಮೇ 2018, 19:29 IST
Last Updated 3 ಮೇ 2018, 19:29 IST
ಬಿಬಿಎಂಪಿ ಆಯುಕ್ತ ಎತ್ತಂಗಡಿ
ಬಿಬಿಎಂಪಿ ಆಯುಕ್ತ ಎತ್ತಂಗಡಿ   

ಬೆಂಗಳೂರು: ವಿಧಾನಸಭಾ ಚುನಾವಣೆಗೆ 10 ದಿನಗಳು ಬಾಕಿ ಇರುವಾಗಲೇ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ.

ಜಿಲ್ಲಾ ಚುನಾವಣಾಧಿಕಾರಿಯೂ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ್‌ ಪ್ರಸಾದ್ ಹಠಾತ್‌ ವರ್ಗಾವಣೆಗೆ ಕಾರಣವನ್ನು ಚುನಾವಣಾ ಆಯೋಗ ತಿಳಿಸಿಲ್ಲ. ಆದರೆ, ನಗರದಲ್ಲಿ ವ್ಯಾಪಕವಾಗಿ ಹಣ ಮತ್ತು ವಸ್ತುಗಳ ಹಂಚುವಿಕೆ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ದೂರುಗಳು ಬಂದಿದ್ದವು ಎಂದು ಮೂಲಗಳು ಹೇಳಿವೆ.

ಇತ್ತೀಚೆಗೆ ಮೈಸೂರು ಜಿಲ್ಲಾಧಿಕಾರಿ ದರ್ಪಣ್‌ ಜೈನ್‌ ಅವರನ್ನು ಚುನಾವಣಾ ಕರ್ತವ್ಯದಲ್ಲಿ ನಿರಾಸಕ್ತಿ ತೋರಿಸಿದ ಕಾರಣ ವರ್ಗಾವಣೆ ಮಾಡಲಾಯಿತು ಎಂದು ಆಯೋಗ ಅಧಿಕಾರಿಗಳು ತಿಳಿಸಿದ್ದರು.

ADVERTISEMENT

ಬಿಬಿಎಂಪಿ ಆಯುಕ್ತರ ಹುದ್ದೆಗೆ ಕೃಷಿ ಇಲಾಖೆ ಕಾರ್ಯದರ್ಶಿ ಎಂ.ಮಹೇಶ್ವರ ರಾವ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚುನಾವಣಾಧಿಕಾರಿಯಾಗಿಯೂ ಇವರು ಕಾರ್ಯ ನಿರ್ವಹಿಸಲಿದ್ದಾರೆ.  ಚುನಾವಣಾ ಆಯೋಗದ ಸೂಚನೆಯ ಮೇರೆಗೆ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.