ADVERTISEMENT

ಬೀರಗೊಂಡನಹಳ್ಳಿ ಕೆರೆ ಒತ್ತುವರಿ ತೆರವಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಜುಲೈ 2017, 19:35 IST
Last Updated 18 ಜುಲೈ 2017, 19:35 IST
ಹೂಳು ತುಂಬಿದ ಕೆರೆ
ಹೂಳು ತುಂಬಿದ ಕೆರೆ   

ದಾಬಸ್‌ಪೇಟೆ: ‘ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಹೋಬಳಿಯ ಬೀರಗೊಂಡನಹಳ್ಳಿ ಕೆರೆಯ ಒತ್ತುವರಿಯನ್ನು ತೆರವುಗೊಳಿಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದರು.

‘ಗ್ರಾಮದ ಪ್ರಭಾವಿ ವ್ಯಕ್ತಿಗಳು ಕೆರೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಕೆರೆ ಜಾಗವನ್ನು ಸರ್ವೇ ಮಾಡಿ ಒತ್ತುವರಿ ತೆರವು ಮಾಡಬೇಕು’ ಎಂದು ಆಗ್ರಹಿಸಿದರು.

‘ಕೆರೆಯಲ್ಲಿ ಹೂಳು ತುಂಬಿದ್ದು, ಬೇಲಿಗಿಡಗಳು ಬೆಳೆದಿವೆ. ಇದರಿಂದ ಮಳೆ ನೀರು ಸಂಗ್ರಹಗೊಳ್ಳುತ್ತಿಲ್ಲ. ಕೆರೆಯನ್ನು ಅಭಿವೃದ್ಧಿ ಪಡಿಸುವ ಬದಲು, ಗಿಡಗಳನ್ನು ನೆಡಸಲಾಗಿದೆ’ ಎಂದು ದೂರಿದರು.

ADVERTISEMENT

‘ಗಿಡಗಳನ್ನು ನೆಡಲು ಗುಂಡುತೋಪು, ಗೋಮಾಳ, ರಸ್ತೆ ಬದಿಯಲ್ಲಿ ಸಾಕಷ್ಟು ಜಾಗವಿದೆ. ಅದನ್ನು ಬಿಟ್ಟು ಕೆರೆಯ ಜಾಗದಲ್ಲಿ ಗಿಡಗಳನ್ನು ನೆಡಲಾ
ಗಿದೆ. ಇದರಿಂದ ಭೂಗಳ್ಳರಿಗೆ ಮತ್ತಷ್ಟು ಅನುಕೂಲವಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.