
ಪ್ರಜಾವಾಣಿ ವಾರ್ತೆಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ 2011-12 ನೇ ಶೈಕ್ಷಣಿಕ ಸಾಲಿನಲ್ಲಿ ದೂರ ಶಿಕ್ಷಣದ ಮೂಲಕ ಕನ್ನಡ ಮಾಧ್ಯಮದಲ್ಲಿ ಆರು ತಿಂಗಳ ಅವಧಿಯ ಕೊಯ್ಲೋತ್ತರ ನಿರ್ವಹಣೆ ಸರ್ಟಿಫಿಕೇಟ್ ಕೋರ್ಸ್ಗೆ ಅರ್ಜಿ ಆಹ್ವಾನಿಸಿದೆ.
ಆಹಾರ ಧಾನ್ಯ, ಹಣ್ಣು ಮತ್ತು ತರಕಾರಿ ಕೊಯ್ಲ್ತ್ತರ ನಿರ್ವಹಣೆ ಸರ್ಟಿಫಿಕೇಟ್ ಕೋರ್ಸ್ಗಳು ನಡೆಯಲಿದ್ದು, 7 ತರಗತಿವರೆಗೆ ಓದಿರುವ, ಕನಿಷ್ಠ 18 ವರ್ಷ ತುಂಬಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಐವತ್ತು ರೂಪಾಯಿ ನಗದು, ಡಿ.ಡಿ ಅಥವಾ ಪೋಸ್ಟಲ್ ಮೂಲಕ ಅರ್ಜಿ ಪಡೆದು, ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ.
ವಿಳಾಸ: ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ದೂರಶಿಕ್ಷಣ ವಿಭಾಗ, ಕೃಷಿ ಮಹಾವಿದ್ಯಾಲಯ, ಜಿಕೆವಿಕೆ. ಹೆಚ್ಚಿನ ಮಾಹಿತಿಗೆ 23330153 ಮತ್ತು 94495 51060 ಸಂಪರ್ಕಿಸಲು ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.