ಕೃಷ್ಣರಾಜಪುರ: `ಹಣದುಬ್ಬರದಿಂದ ರೈತರ ಜೀವನ ಡೋಲಾಯಮಾನ ಸ್ಥಿತಿ ತಲುಪಿದೆ. ಅವಶ್ಯ ಪದಾರ್ಥಗಳ ಬೆಲೆ ಏರಿಕೆಯಿಂದ ಬಡವರು, ಕೆಳ ಹಾಗೂ ಮಧ್ಯಮ ವರ್ಗದವರ ಬದುಕು ದುಸ್ತರವಾಗಿದೆ~ ಎಂದು ಮಿರಾಂಡ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಎಸ್.ಎನ್.ಕಾತರಕಿ ಅಭಿಪ್ರಾಯಪಟ್ಟರು.
ಸರ್ ಎಂ.ವಿಶ್ವೇಶ್ವರಯ್ಯ ಅವರ 151ನೇ ಜನ್ಮ ದಿನದ ಅಂಗವಾಗಿ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿದ್ದ `ಜಾಗತೀಕರಣದಿಂದ ಭಾರತದ ಆರ್ಥಿಕ ವಲಯದಲ್ಲಿನ ಬದಲಾವಣೆಗಳು~ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
`ಭ್ರಷ್ಟಾಚಾರ ಎಲ್ಲ ಹಂತಗಳಲ್ಲೂ ತಾಂಡವವಾಡುತ್ತಿದೆ. ರಾಷ್ಟ್ರವನ್ನು ತಿದ್ದುವ ಕೆಲಸ ಇಂದು ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ~ ಎಂದರು.
ವಿಭಾಗದ ಮುಖ್ಯಸ್ಥರಾದ ಪ್ರೊ. ಎಸ್. ಎಂ. ಹೆಗಡೆ, ಜ್ಯೋತಿ, ವ್ಯ.ವಿ.ರತ್ನ, ಅರವಿಂದ ರೆಡ್ಡಿ ವಿಷಯ ಮಂಡಿಸಿದರು. ಪ್ರಾಚಾರ್ಯ ಡಾ. ಬಸವರಾಜಯ್ಯ ಅವರು ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.