ADVERTISEMENT

ಭದ್ರಗಿರಿ ಕೇಶವದಾಸರ ಪುಣ್ಯಾರಾಧನೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2013, 19:37 IST
Last Updated 6 ಡಿಸೆಂಬರ್ 2013, 19:37 IST

ನೆಲಮಂಗಲ: ತಾಲ್ಲೂಕಿನ ಅರಿಶಿನ­ಕುಂಟೆಯ ವಿಶ್ವಶಾಂತಿ ಆಶ್ರಮದ ಸಂಸ್ಥಾಪಕ ಸದ್ಗುರು ಸಂತ ಭದ್ರಗಿರಿ ಕೇಶವದಾಸರ 16ನೇ ಪುಣ್ಯಾರಾಧನಾ ಮಹೋತ್ಸವವನ್ನು ಶನಿವಾರ ಮತ್ತು ಭಾನುವಾರ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿದೆ.
 
ಪುಣ್ಯಾರಾಧನೆ ಪ್ರಯುಕ್ತ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಲೇಖನ ಸಾಮಗ್ರಿಗಳು ನೀಡಲಾಗುತ್ತದೆ. ಅಲ್ಲದೇ ಅಂಧ ಮಕ್ಕಳಿಗೆ ವಸ್ತ್ರಗಳನ್ನು ವಿತರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ  ಸಂತ ಭದ್ರಗಿರಿ ಸರ್ವೋತ್ತಮ ಅವರು ಆರ್ಶೀವಚನ ನೀಡಲಿದ್ದಾರೆ.

 ಭಾನುವಾರ ಗೋಂಧಿ ಸಂಸ್ಥಾನ ಮಠದ ನಾಮದೇವಾನಂದ ಭಾರತಿ ಸ್ವಾಮೀಜಿ ಅವರಿಂದ ಭಜನೆ ನಡೆಯಲಿದೆ. 36ಅಡಿ ಎತ್ತರದ ಏಕಶಿಲಾ ವಿಶ್ವರೂಪ ವಿಜಯ ವಿಠಲ ದೇವರಿಗೆ ಮಹಾ ಕುಂಭಾಭಿಷೇಕ ಹಮ್ಮಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.