ADVERTISEMENT

ಭಾಷೆ ರಕ್ಷಣೆಗೆ ಮುಂದಾಗಲು ಸಲಹೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2012, 19:30 IST
Last Updated 5 ನವೆಂಬರ್ 2012, 19:30 IST
ಭಾಷೆ ರಕ್ಷಣೆಗೆ ಮುಂದಾಗಲು ಸಲಹೆ
ಭಾಷೆ ರಕ್ಷಣೆಗೆ ಮುಂದಾಗಲು ಸಲಹೆ   

ತಲಘಟ್ಟಪುರ: `ಪ್ರತಿ ವ್ಯಕ್ತಿ ಸಹ ಗ್ರಾಮೀಣ ಸಂಸ್ಕೃತಿ, ನೆಲ, ಜಲ, ಭಾಷೆಯನ್ನು ರಕ್ಷಣೆ ಮಾಡಲು ಮುಂದಾಗಬೇಕು~ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀರವಿಶಂಕರ್ ಸಲಹೆ ನೀಡಿದರು.

ಕಗ್ಗಲೀಪುರದಲ್ಲಿ ಜೈಭುವನೇಶ್ವರಿ ಗೆಳೆಯರ ಬಳಗದ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಕಗ್ಗಲೀಪುರ ಉತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಯ ವಸತಿ ಮಹಾಮಂಡಲದ ಉಪಾಧ್ಯಕ್ಷ ಎಸ್.ಟಿ.ಸೋಮಶೇಖರ್, ಜಿ.ಪಂ.ಸದಸ್ಯೆ ಮಂಜುಳ ಅಶ್ವತ್ಥನಾಯ್ಕ, ತಾ.ಪಂ.ಸದಸ್ಯೆ ಎಲ್ಲಮ್ಮ ನಾರಾಯಣಸ್ವಾಮಿ, ಗ್ರಾ.ಪಂ.ಅಧ್ಯಕ್ಷೆ ಮಂಜುಳಾಶ್ಯಾಮ್ ಉಪಸ್ಥಿತರಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.