ADVERTISEMENT

‘ಭ್ರಷ್ಟರನ್ನು ಬಹಿಷ್ಕರಿಸುವ ಸಮಾಜ ನಿರ್ಮಾಣವಾಗಬೇಕು’

​ಪ್ರಜಾವಾಣಿ ವಾರ್ತೆ
Published 6 ಜುಲೈ 2017, 19:44 IST
Last Updated 6 ಜುಲೈ 2017, 19:44 IST
‘ಭ್ರಷ್ಟರನ್ನು ಬಹಿಷ್ಕರಿಸುವ ಸಮಾಜ ನಿರ್ಮಾಣವಾಗಬೇಕು’
‘ಭ್ರಷ್ಟರನ್ನು ಬಹಿಷ್ಕರಿಸುವ ಸಮಾಜ ನಿರ್ಮಾಣವಾಗಬೇಕು’   

ಬೆಂಗಳೂರು: ‘ಭ್ರಷ್ಟಾಚಾರಿಗಳಿಗೆ ಸಮಾಜದಲ್ಲಿ ಇಂದಿಗೂ ಮರ್ಯಾದೆ ಸಿಗುತ್ತಿದೆ. ಅವರನ್ನು ಸಾಮಾಜಿಕವಾಗಿ ಬಹಿಷ್ಕರಿಸುವ ನಿರ್ಭೀತ ಸಮಾಜ ನಿರ್ಮಾಣಕ್ಕೆ ಯುವಜನತೆ ಪಣ ತೊಡಬೇಕು’ ಎಂದು ನಿವೃತ್ತ  ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಅಭಿಪ್ರಯ ವ್ಯಕ್ತಪಡಿಸಿದರು.

ಕೆಂಗೇರಿಯ ಶೇಷಾದ್ರಿಪುರ ಕಾಲೇಜಿನಲ್ಲಿ ನಡೆದ ‘ದೃಷ್ಟಿ ಕೋನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮತದಾನದ ವೇಳೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಅಂತಹ ವ್ಯಕ್ತಿಗಳು ಅಭ್ಯರ್ಥಿ ಪಟ್ಟಿಯಲ್ಲಿ ಇಲ್ಲವಾದಲ್ಲಿ ನೋಟ ನಿಮ್ಮ ಆಯ್ಕೆ ಆಗಬೇಕು. ಆಗ ಮಾತ್ರ ಪಕ್ಷಗಳು ಸೂಕ್ತ ಅಭ್ಯರ್ಥಿಗಳಿಗೆ ಬಿ.ಫಾರಂ ನೀಡುತ್ತವೆ’ ಎಂದು ಹೇಳಿದರು.

ADVERTISEMENT

ಕಾಲೇಜು ಟ್ರಸ್ಟ್‌ನ ಕಾರ್ಯದರ್ಶಿ ಸರೋಜ ಕೆ.ಎಂ.ನಂಜಪ್ಪ, ‘ಪ್ರಮಾಣಿಕರು ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು. ಭ್ರಷ್ಟಾಚಾರ ತಡೆ ಹಾಗೂ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಕಾರ್ಯ ದಲ್ಲಿ ವಿದ್ಯಾರ್ಥಿಗಳಿಂದಲೇ ನಡೆಯಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.