ADVERTISEMENT

ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿ: ಹೆಗ್ಡೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2012, 19:30 IST
Last Updated 18 ಜನವರಿ 2012, 19:30 IST

ಬೆಂಗಳೂರು:  ರೋಟರಿಯಂತಹ ಸಮುದಾಯ ಸಂಸ್ಥೆಗಳು ಭ್ರಷ್ಟಾಚಾರದ ವಿರುದ್ಧ  ಧ್ವನಿ ಎತ್ತಿ ರಾಷ್ಟ್ರದ ಉನ್ನತಿಗಾಗಿ ಶ್ರಮಿಸಬೇಕೆಂದು ನಿವೃತ ಲೋಕಾಯುಕ್ತ ಸಂತೋಷ್ ಹೆಗ್ಡೆ ಹೇಳಿದರು.

ಕೆಂಗೇರಿ  ರೋಟರಿ ಸಂಸ್ಥೆಯು ಆಯೋಜಿಸಿದ್ದ ಸಾರ್ವಜನಿಕ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸರ್ಕಾರ ಜನರ ಹಣದಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಪ್ರಚಾರ ಗಿಟ್ಟಿಸುತ್ತದೆ, ಆದರೆ ರೋಟರಿ ಸಂಸ್ಥೆಯವರು ಸ್ವಂತ ಹಣವನ್ನು ಸೇವಾಕಾರ್ಯಕ್ಕೆ ಬಳಸುತ್ತಿ ರುವುದು  ಪ್ರಶಂಸನೀಯ ಎಂದರು.  ರೋಟರಿ ಸಂಸ್ಥೆಯ ಎಸ್. ನಾಗೇಂದ್ರ, ಎ.ಎಸ್. ವೆಂಕಟೇಶ್, ರಾಜೇಂದ್ರ ರೈ, ಬಿ. ಅಮರನಾಥ್, ಹರಿಯಾನಿ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.