ADVERTISEMENT

ಮದನಿಯನ್ನು ಭೇಟಿ ಮಾಡಿದ ಕುಟುಂಬ ಸದಸ್ಯರು

​ಪ್ರಜಾವಾಣಿ ವಾರ್ತೆ
Published 24 ಜನವರಿ 2012, 19:30 IST
Last Updated 24 ಜನವರಿ 2012, 19:30 IST

ಬೆಂಗಳೂರು: ನಗರದಲ್ಲಿ 2008ರಲ್ಲಿ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಪಿಡಿಪಿ ನಾಯಕ ಅಬ್ದುಲ್ ನಾಸರ್ ಮದನಿಯನ್ನು ಆತನ ಕುಟುಂಬ ಸದಸ್ಯರು ಮಂಗಳವಾರ ಮಧ್ಯಾಹ್ನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

`ಮದನಿಯ ಪತ್ನಿ ಸೂಫಿಯಾ, ಮಗಳು ಸೇರಿದಂತೆ ಒಟ್ಟು ಐದು ಮಂದಿ ಆತನನ್ನು ಜೈಲಿನ ಸಂದರ್ಶಕರ ಕೊಠಡಿಯಲ್ಲಿ ಭೇಟಿ ಮಾಡಿದ್ದರು. ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಕಾರಾಗೃಹಕ್ಕೆ ಬಂದಿದ್ದ ಕುಟುಂಬ ಸದಸ್ಯರು 30 ನಿಮಿಷಗಳ ಕಾಲ ಮದನಿ ಜತೆ ಮಾತುಕತೆ ನಡೆಸಿದರು~ ಎಂದು ಕಾರಾಗೃಹದ ಹಿರಿಯ ಅಧಿಕಾರಿಗಳು  `ಪ್ರಜಾವಾಣಿ~ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.